Keep in touch...

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ - ನನ್ನ ಇ-ಮೇಲ್ : gshattigoudar@gmail.com ಮೊಬೈಲ್: +9199454 79292 (only SMS / WhatsApp)

Tuesday 22 May 2012

ಪ್ರಾಮಾಣಿಕ ಅಧಿಕಾರಿಗಳ ಜೀವಕ್ಕೆ ಬೆಲೆಯೆ ಇಲ್ಲವೇ..?

           ಮೇ ೧೫ರ ಮಂಗಳವಾರ ರಾತ್ರಿ ಕಚೇರಿಯಿಂದ ಕಾರಿನಲ್ಲಿ ಮನೆಯತ್ತ ಹೊರಟಿದ್ದ ಕೆ.ಎ.ಎಸ್. ಅಧಿಕಾರಿ ಎಸ್.ಪಿ.ಮಹಾಂತೇಶ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಲ್ಲಿಗೆ ನರ್ಸಿಂಗ್ ಹೋಂಗೆ ದಾಖಲು ಮಾಡಲಾಯಿತು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಅಂದ ಮೇ ೨೦ ರ ಬೆಳಗಿನ ಜಾವ ೪ಗಂಟೆಯ ಸುಮಾರು ಮಹಾಂತೇಶ್ ಅವರು ಕೊನೆಯುಸಿರೆಳೆದರು. ಈ ಸುದ್ದಿ ನಾಡಿನಾದ್ಯಂತ ಕಾಳ್ಗಿಚ್ಚಿನಂತೆ ಹರಡಿದೆ. ನಾಡಿನೆಲ್ಲೆಡೆ ಈ ವಿಷಯವಾಗಿ ಚರ್ಚೆ ನಡೆದಿದೆ. ಪ್ರಾಮಾಣಿಕ ಅಧಿಕಾರಿ ಮಹಾಂತೇಶ್ ಅವರ ಹತ್ಯೆ ಲ್ಯಾಂಡ್ ಮಾಫಿಯಾದವರಿಂದ ನಡೆದಿದೆ ಎಂಬ ವದಂತಿ ಎಲ್ಲೆಡೆ ಹರಡಿ ಹಲವಾರು ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ. ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡಿರುವ ಈ ಘಟನೆ ವ್ಯಾಪಕ ಖಂಡನೆಗೆ ಒಳಗಾಗಿದೆ. ಪ್ರಾಮಾಣಿಕ ಅಧಿಕಾರಿಗಳು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂಥ ಪರಿಸ್ಥಿತಿ ನಿರ್ಮಾಣವಾಗಬಾರದಿತ್ತು. ಆದಾಗ್ಯೂ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಆಡಳಿತದಲ್ಲಿರುವ ಬೆರಳೆಣಿಕೆಯಷ್ಟು ಪ್ರಾಮಾಣಿಕ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಪ್ರಾಮಾಣಿಕತೆಗೆ ಇಂದು ಬೆಲೆ ಇಲ್ಲ ಎಂಬುದನ್ನು ಈ ಘಟನೆ ನಿರೂಪಿಸುತ್ತಿದೆ. ಜೊತೆಗೆ ಅಂಥ ಅಧಿಕಾರಿಗಳು ಸ್ವರಕ್ಷಣಾ ತಂತ್ರಗಳನ್ನು ಕಲಿತು ವಿಶೇಷ ತರಬೇತಿ ಪಡೆದು ಕರ್ತವ್ಯ ನಿರ್ವಹಿಸುವುದು ಒಳ್ಳೆಯದು ಎಂಬುದು ನನ್ನ ಅನಿಸಿಕೆ. ಆದರೆ ಯಾವುದೇ ಕಾರಣಕ್ಕೂ ಪ್ರಾಮಾಣಿಕ ಅಧಿಕಾರಿಗಳು ನೈತಿಕಸ್ಥೈರ್ಯ ಕಳೆದುಕೊಳ್ಳಬಾರದು.

                       ಜ್ಞಾನಮುಖಿ
                                             




No comments: