Keep in touch...

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ - ನನ್ನ ಇ-ಮೇಲ್ : gshattigoudar@gmail.com ಮೊಬೈಲ್: +9199454 79292 (only SMS / WhatsApp)

Monday, 30 April 2012

ಜೀವನ್ಮುಖಿ

ಚಹಾ ಕುಡಿಯುವಾಗ, ಊಟಕ್ಕೆ ಕುಳಿತಾಗ ಯಾವುದಾದರೊಂದು ಮ್ಯಾಗಜೀನ್, ನ್ಯೂಸ್ ಪೇಪರ್ ಅಥವಾ ಕೈಗೆ ಸಿಕ್ಕ ಪುಸ್ತಕವೊಂದನ್ನು ಕೈಗೆತ್ತಿಕೊಂಡು ಕುಳಿತುಬಿಡುವುದು ನನ್ನ ದುರಭ್ಯಾಸ (?).ಅದಿರಲಿ, ನಿನ್ನೆ ಹೀಗೆ ಕುಳಿತಾಗ `ವಿಜಯವಾಣಿ' ಪತ್ರಿಕೆಯಲ್ಲಿ ಪ್ರಕಟವಾದ ಕಥೆಯೊಂದರ ಮೇಲೆ ಅನಾಯಾಸವಾಗಿ ಕಣ್ಣು ಹೊರಳಾಡಿತು. `ಜೀವನ್ಮುಖಿ' ತಲೆಬರಹದ ಕಥೆಯೊಂದು ಇಷ್ಟವಾಯಿತು. ಜೀವನದಲ್ಲಿ ದುಡ್ಡೊಂದೇ ಮುಖ್ಯ ಎನ್ನುವವರಿಗೆ ನೀತಿಪಾಠದಂತಿದೆ ಈ ಕಥೆ. ಜೀವನದಲ್ಲಿ ದುಡ್ಡು ಮುಖ್ಯ ನಿಜ. ಆದರೆ ಅದಕ್ಕಿಂತ ಮುಖ್ಯವಾದದ್ದು ಇನ್ನೊಂದು ಇದೆ. ಅದೇ - ಮಾನವೀಯ ಮೌಲ್ಯಗಳು. ಆದರ್ಶಗಳು, ತತ್ವ-ಸಿದ್ಧಾಂತಗಳು. ಹೌದು, ಬೇಕಾದರೆ ಒಮ್ಮೆ ಹಿಂತಿರುಗಿ ನೋಡಿ. ಇತಿಹಾಸದಲ್ಲಿ ಆಗಿ ಹೋದ ಮಹಾನ್ ಮಹಾನ್ ವ್ಯಕ್ತಿಗಳೆಲ್ಲ ತತ್ವ-ಸಿದ್ಧಾಂತಗಳಿಗೆ, ಮಾನವೀಯ ಮೌಲ್ಯಗಳಿಗೆ ಬೆಲೆಕೊಟ್ಟರು. ಅದಕ್ಕೆ ಅವರೆಲ್ಲ ಅಜರಾಮರಾದರು. ಇತಿಹಾಸದಲ್ಲಿ ಅಸಂಖ್ಯ ಸಂಖ್ಯೆಯಲ್ಲಿ ಶ್ರೀಮಂತರಾಗಿ ಹೋಗಿದ್ದಾರೆ. ಆದರೆ ಅವರ ಯಾರ ಹೆಸರೂ ನಮಗೆ ತಿಳಿದಿಲ್ಲ ಅವರೆಲ್ಲ ಕತ್ತಲ ಮರೆಯಲ್ಲಿ ಮರೆಯಾಗಿ ಹೋಗಿದ್ದಾರೆ. ದುಡ್ಡೆಂಬ ಮಾಯಾಜಿಂಕೆಯ ಹಿಂದೆ ಓಡಿ ಹೋದವರಾರು ನೆಮ್ಮದಿಯಾಗಿ ಬದುಕಿಲ್ಲ. ಬದುಕುವುದೂ ಇಲ್ಲ. ಆದಾಗ್ಯೂ ನಾವೆಲ್ಲ ದುಡ್ಡು ದುಡ್ಡು ಎಂದು ಹಂಬಲಿಸಿವುದೇತಕೋ....? ಹಾಗಾದರೆ ಜೀವನದಲ್ಲಿ ದುಡ್ಡು ಮುಖ್ಯ ಅಲ್ಲವೇ ಅಲ್ಲವಾ...? ದುಡ್ಡು ಗಳಿಸಬಾರದಾ...? ಖಂಡಿತ ಗಳಿಸಬೇಕು ನಮ್ಮ ಜೀವನಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಗಳಿಸಬೇಕು. ನನ್ನ ಮಕ್ಕಳ ಜೀವನಕ್ಕೂ ದುಡ್ಡು ಕೂಡಿಡ್ತೀನಿ, ಮುಂದೆ ನನ್ನ ಏಳೆಂಟು ತಲೆಮಾರುಗಳು ಕುಳಿತು ತಿನ್ನುವಷ್ಟು ದುಡ್ಡು ಸಂಪಾದಿಸ್ತೀನಿ ಅಂತ ಹೊರಟರೆ ಅದಕ್ಕಿಂತ ಮೂರ್ಖತನ ಇನ್ನೊಂದಿಲ್ಲ. ಸುಮ್ಮನೆ ಒಮ್ಮೆ ಯೋಚಿಸಿ ನೋಡಿ. ನಮಗೆ ನಮ್ಮ ತಂದೆಯ ಮೇಲೆ ಇದ್ದಷ್ಟು ಪ್ರೀತಿ ನಮ್ಮ ತಾತನ ಮೇಲಿರುವುದಿಲ್ಲ. ತಾತನ ಮೇಲೆ ಇದ್ದಷ್ಟು ಪ್ರೀತಿ ಮುತ್ತಾತನ ಮೇಲೆ ಇರುವುದಿಲ್ಲ. ಇನ್ನೂ ಮುತ್ತಾತನ ಮೇಲೆ ಪ್ರೀತಿ ಇರುವುದಿರಲಿ ಆತ ಯಾರು, ಹೇಗಿದ್ದ ಏನು ಹೆಸರು ಎಂಬುದೇ ಸರಿಯಾಗಿ ತಿಳಿದಿರುವುದಿಲ್ಲ. ನಮ್ಮ ಪಾಲಿಗೆ ಆತ ಅಸ್ಪಷ್ಟ ಚಿತ್ರ. ಇದೇ ಮುಂದೆ ನಮಗೂ ಅನ್ವಯಿಸುತ್ತದೆ ಅಲ್ಲವಾ...? ಹಾಗಾದರೆ ಯಾರಿಗಾಗಿ ಈ ಗಳಿಕೆ? ಯಾರ ಮೆಚ್ಚಿಸುವುದಕ್ಕಾಗಿ ಈ ದುಡಿಕೆ? ಬಿಲೀವ್ಹ್ ಮಿ ಫ್ರೆಂಡ್ಸ್ ಈ ಜಗತ್ತಿನಲ್ಲಿ ತತ್ವ-ಸಿದ್ಧಾಂತಗಳನ್ನು ನೆಚ್ಚಿ ಬದುಕಿದವರು ಇದುವರೆಗೂ ಸತ್ತಿಲ್ಲ. ಆದರೆ ಹಣವನ್ನೇ ನೆಚ್ಚಿ ಬದುಕಿದವರ ಹೆಸರೇ ನಮಗೆ ತಿಳಿದಿಲ್ಲ. ದುಡ್ಡಿಗೆ ದ್ವಿತೀಯ ಆದ್ಯತೆ ನೀಡೋಣ. ಮಾನವೀಯ ಮೌಲ್ಯಗಳಿಗೆ, ತತ್ವ-ಸಿದ್ಧಾಂತಗಳಿಗೆ ಪ್ರಥಮಾದ್ಯತೆ ನೀಡೋಣ. ಅಂದಾಗ ಮಾತ್ರ ಸಾರ್ಥಕ ಬದುಕು ಬಾಳಿದಂಥ ನೆಮ್ಮದಿ ನಮ್ಮದಾಗುತ್ತದೆ.

             ಹಣದ ಬೆನ್ನುಹತ್ತಿ ಹೋದ ವೈದ್ಯನೊಬ್ಬನ ಕಥೆ-ವ್ಯಥೆಯನ್ನು ವಿವೇಕಾನಂದ ಕಾಮತ್ ಅವರು ಸುಂದರವಾಗಿ ಇಲ್ಲಿ ಒಡಮೂಡಿಸಿದ್ದಾರೆ. ಒಮ್ಮೆ ಓದಿಕೊಳ್ಳಿ.
                                                                          ನಿಮ್ಮವ
                                                                         ಜ್ಞಾನಮುಖಿ
                                                                 

Saturday, 28 April 2012

ಇವ ನಮ್ಮವ...

ಬಡತನದಲ್ಲಿ ಬೆಳೆದ ಹುಡುಗ ಸಾಧಕನಾದ ಯಶೋಗಾಥೆ.

Monday, 9 April 2012

ಮೀನಾ ನಾಟಕ ಮತ್ತು ಬೀಳ್ಕೊಡುವ ಸಮಾರಂಭ

ಇತ್ತೀಚೆಗೆ ನಮ್ಮ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಒತ್ತನ್ನು ಕುರಿತು `ಮೀನಾ' ಎಂಬ ಬೀದಿನಾಟಕವನ್ನು ಏರ್ಪಡಿಸಿದ್ದೆವು. ಹಾಗೂ ೭ನೇ ವರ್ಗದ ವಿದ್ಯಾರ್ಥಿ/ನಿಯರ ಬೀಳ್ಕೊಡುವ ಸಮಾರಂಭವನ್ನು ಹಮ್ಮಿಕೊಂಡಿದ್ದೆವು. ತದನಿಮಿತ್ಯ ಆ ಚಿತ್ರಗಳನ್ನು ಇಲ್ಲಿ ಪ್ರಕಟಿಸಲಾಗಿದೆ.
               ಮುಖ್ಯ ಗುರುಗಳಾದ ಶ್ರೀಮತಿ ಪಿ.ಆರ್.ಚವ್ಹಾಣ ಅವರಿಂದ ಗಿಳಿ ಪಾತ್ರದಾರಿ ವಿದ್ಯಾ ಕಾಳೆ ಇವಳಿಗೆ ಪ್ರಶಸ್ತಿ ಫಲಕ

ಬೀಳ್ಕೊಡುವ ಸಮಾರಂಭದಂದು ನಮ್ಮ ಮುದ್ದು ವಿದ್ಯಾರ್ಥಿಗಳು ನನಗೆ ಹೂ ನೀಡುತ್ತಿರುವುದು. ಮುಖದಲ್ಲಿ ನಗೆಯಿತ್ತಷ್ಟೆ, ಆದರೆ ಬೀಳ್ಕೊಡುವ ಸಂಗತಿ ಹೃದಯ ಭಾರವಾಗಿಸಿತ್ತು.

Sunday, 25 March 2012

ಗೆದ್ದೇ ಗೆಲ್ಲುವೆವು - ಕೃತಿ ಪರಿಚಯ

ಪ್ರಿಯ ಓದುಗರೇ,
       ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಒಂದು ಗಂಟೆ ನಿದ್ರಿಸಿದರೂ ಜಗತ್ತು ನಮ್ಮನ್ನು ಬಿಟ್ಟು ನೂರಾರು ಕಿಲೋಮೀಟರ್ ಮುಂದಕ್ಕೆ ಓಡಿರುತ್ತದೆ. ಜೀವನದ ಪ್ರತಿ ಹಂತದಲ್ಲೂ ಪ್ರತಿ ಕ್ಷಣದಲ್ಲೂ ನಾವು ಸ್ಪರ್ಧೆಯನ್ನು ಎದುರಿಸುತ್ತಿದ್ದೇವೆ. ಅದರಲ್ಲೂ ಅಧ್ಯಯನ ನಿರತ ವಿದ್ಯಾರ್ಥಿ/ಸ್ಪರ್ಧಾರ್ಥಿಗಳಂತೂ ಪ್ರತಿ ಕ್ಷಣವೂ ಸ್ಪರ್ಧಾಕಣದಲ್ಲಿರಬೇಕಾಗುತ್ತದೆ. ಹೀಗೆ ಸ್ಪರ್ಧಾಕಣದಲ್ಲಿದ್ದು ಸ್ಪರ್ಧೆಯನ್ನು ಎದುರಿಸುವುದು ಸುಲಭದ ಮಾತಲ್ಲ. ಎಷ್ಟೋ ಬಾರಿ ನಮಗೆ ಅರಿವಿಲ್ಲದೆಯೇ ಮನಸ್ಸು `ಯಾವನಿಗೆ ಬೇಕು ಈ ಕಾಂಪಿಟೇಶನ್ ಸಾಯ್ಲಿ ಅತ್ಲಾಗೆ' ಎಂದು ಹಾಸಿಗೆ ಹೊದ್ದು ಮಲಗಿಬಿಡುತ್ತದೆ. ಚಿಕ್ಕಚಿಕ್ಕ ಸೋಲು, ನಿರಾಶೆ, ಹತಾಶೆ ಇನ್ನೆಂದು ನಾನು ಪಾಸ್ ಆಗುವುದಿಲ್ಲವೇನೋ ಎಂಬ ಭಾವ ಸದ್ದಿಲ್ಲದೇ ಕಾಡುತ್ತಿರುತ್ತೆ. ಎಷ್ಟೋ ಬಾರಿ ಸ್ಪರ್ಧೆಯನ್ನು ಹೇಗೆ ಎದುರಿಸಬೇಕು ಎಂಬ ಮಾರ್ಗದರ್ಶನವೇ ಸರಿಯಾಗಿ ಲಭ್ಯವಾಗಿರುವುದಿಲ್ಲ. ನೆರೆ-ಹೊರೆಯವರ ಕೊಂಕು ನುಡಿ, ನಿರುತ್ಸಾಹಗೊಳಿಸುವ ಮಾತುಗಳು, ಒಂದೇ ಎರಡೇ ನಮ್ಮನ್ನು ಸ್ಪರ್ಧೆಯಿಂದ ವಿಮುಖಗೊಳಿಸಲು.... ಆದರೆ ಈ ಹಂತದಲ್ಲಿ ಪ್ರತಿಯೊಬ್ಬರಿಗೂ ಸಂಜೀವಿನಿಯಂತೆ ಒದಗಿಬರುವುದೇ - `ಗೆದ್ದೇ ಗೆಲ್ಲುವೆವು' ಕೃತಿ. ನಾಡಿನ ಹೆಸರಾಂತ ಲೇಖಕರಾದ ಹಾಗೂ ನನ್ನ ಆತ್ಮೀಯ ಮಿತ್ರ (ಹಾಗೆಂದು ನಾ ತಿಳಿದುಕೊಂಡಿದ್ದೇನೆ) (ಹಿರಿಯ)ರಾದ ಶ್ರೀ ಮಂಜುನಾಥ ಬೇದ್ರೆಯವರು ಈ ಕೃತಿಯ ಲೇಖಕರು. ಊಟಕ್ಕೆ ಕುಳಿತಿರುವವರಿಗೆ ಏನೇನು ಬಡಿಸಬೇಕು? ಎಷ್ಟು ಬಡಿಸಬೇಕು? ಎಂಬುದನ್ನು ತಿಳಿದ ಪಾಕಶಾಸ್ತ್ರ ಪ್ರವೀಣರಂತೆ ಬೇದ್ರೆ ಮಂಜುನಾಥ ಅವರು ಸ್ಪರ್ಧಾರ್ಥಿಗಳಿಗೆ ಉಪಯುಕ್ತವಾಗುವಂತೆ - ಐ.ಎ.ಎಸ್., ಐ.ಪಿ.ಎಸ್. ಕೆ.ಎ.ಎಸ್.ನಂತಹ ಪರೀಕ್ಷೆಗಳಿಗೆ ಹೇಗೆ ಸಿದ್ಧರಾಗುವುದು? ಕೆ.ಎ.ಎಸ್.ನ ಹೊಸ ಪಠ್ಯಕ್ರಮ ಏನು? ಸಂದರ್ಶನವನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ? ಉಪಯುಕ್ತವಾದ ವೆಬ್‍ಸೈಟ್‍ಗಳು ಯಾವುವು? ಹೀಗೆ ಹತ್ತು ಹಲವು ವಿಷಯಗಳನ್ನು  ಸ್ಪರ್ಧಾರ್ಥಿಗಳಿಗೆ ಉಣಬಡಿಸಿದ್ದಾರೆ.. ಪ್ರತಿಯೊಬ್ಬ ಸ್ಪರ್ಧಾರ್ಥಿಯ ಕೈಚೀಲದಲ್ಲಿ, ಗ್ರಂಥಾಲಯದಲ್ಲಿ ಇರಲೇಬೇಕಾದ ಪುಸ್ತಕ ಇದು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು. ಹಾಗಾದರೆ ಇನ್ನೇಕೆ ತಡ...? ಈಗಲೇ ಪುಸ್ತಕ ತರಿಸಿಕೊಳ್ಳಿ. ಓದಿ ಮುಗಿಸುವದರೊಳಗೆ ನಿಮ್ಮಲಿ ನವ ಚೈತನ್ಯವೊಂದು ಮೂಡಿರುತ್ತದೆ. ಪ್ರಾಮಿಸ್........

 

 

Gedde Gelluvevu - We Will Win - A Handbook on Career Guidance and Personality Development by Bedre Manjunath

Gedde Gelluvevu - We Will Win - A Handbook on Career Guidance and Personality Development by Bedre Manjunath

Gedde Gelluvevu - We Will Win - A Handbook on Career Guidance and Personality Development by  Bedre Manjunath
Published by Navakarnataka Publications, Bangalore  Pages: 216 + 4 ,  Price: 100/-

Copies are available from all Navakarnataka Book Stores, Exhibition Outlets, Leading Book Stalls, Bus-Stand Book Depots and also from 
www.flipkart.com
WWW - WE WILL WIN. ಗೆದ್ದೇ ಗೆಲ್ಲುವೆವು! ಹೇಗೆ? ಗೆಲವಿನ ಗುಟ್ಟನ್ನು ಹಂಚಿಕೊಳ್ಳುವ ಕೃತಿ ಇದು. ಎಂಪ್ಲಾಯಬಿಲಿಟಿ ಸ್ಕಿಲ್ಸ್ - ಪೂರ್ವಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ "ಗೆದ್ದೇ ಗೆಲ್ಲುವೆವು - ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ, ಹೊಸ ಹೊಸ ಕೋರ್ಸ್‌ಗಳ ಮಾಹಿತಿ ಸಾಹಿತ್ಯ ಕೈಪಿಡಿ" ಕನ್ನಡದಲ್ಲಿ ದೊರೆಯುವ ಏಕೈಕ ಸಮಗ್ರ ವೃತ್ತಿ ಮಾರ್ಗದರ್ಶಿ ಮಾಹಿತಿ ಸಾಹಿತ್ಯ ಕೃತಿ. ಎಂಪ್ಲಾಯಬಿಲಿಟಿ ಸ್ಕಿಲ್ಸ್! ಐ.ಕ್ಯು., ಇ.ಕ್ಯು., ವಿ.ಕ್ಯು., ಕೆ.ಕ್ಯು., ಜಿ.ಕೆ.ಕ್ಯು., ಸಿ.ಕ್ಯು., ಮೊದಲಾದ ಸಾಮರ್ಥ್ಯಗಳು, ಎಸ್.ಕ್ಯು., ಸಿ.ವಿ./ ರೆಸ್ಯೂಮೆ / ಬಯೋಡಾಟಾ ಹೇಗಿರಬೇಕು ? ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಿನಪತ್ರಿಕೆಗಳೇ ದಾರಿದೀಪ, ಎಸ್.ಡಿ.ಎ. / ಎಫ್.ಡಿ.ಎ./ಕೆ.ಇ.ಎಸ್./ಕೆ.ಎ.ಎಸ್./ಐ.ಎ.ಎಸ್. ಪರೀಕ್ಷೆಗಳಿಗೆ ಸಿದ್ಧತೆ ಹೇಗೆ ? ಆದ್ರೆ ಆಡೋಕ್ಬಂದೆ, ಆಗ್ದಿದ್ರೆ ನೋಡೋಕ್ಬಂದೆ ಅನ್ನೋರಿಗೆಲ್ಲಾ ಈ ಐ.ಎ.ಎಸ್./ಐ.ಎಫ್.ಎಸ್., ಯಂಗ್ ಇಂಡಿಯಾ ಬ್ಯುರೋಕ್ರಸಿ, ನೇಮಕಾತಿ ಪರೀಕ್ಷೆಗಳು, ವಿಭಿನ್ನವಾಗಿ ಆಲೋಚಿಸಿ - ಯಶಸ್ಸು ಗಳಿಸಿ, ಎಡ್ವರ್ಡ್-ಡ-ಬೋನೋ, ಡಾ. ಸ್ಪೆನ್ಸರ್ ಜಾನ್ಸನ್, ಪಾಲ್ ಆರ್ಡೆನ್, ಗ್ಲಾಡ್‌‍ವೆಲ್‌ನ 10,000 ಗಂಟೆಗಳ ಪರಿಶ್ರಮ ಸೂತ್ರ!, ಸ್ಟೀವ್ ಜಾಬ್ಸ್‌ನ - ಸ್ಟೇ ಹಂಗ್ರಿ, ಸ್ಟೇ ಫೂಲಿಶ್, ದಿ ಲಾಸ್ಟ್ ಲೆಕ್ಚರ್... ಒಹ್! ಏನೆಲ್ಲಾ ಅಡಗಿದೆ ಇಲ್ಲಿ! ಶಿಕ್ಷಕರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಯಶಸ್ಸಿನ ಬೆನ್ನು ಹತ್ತಿರುವ ಸ್ಪರ್ಧಾರ್ಥಿಗಳ ಆಪ್ತ ಸಂಗಾತಿ ಇದು. ಕ್ವಿಜ್, ಅಡ್ವೆಂಚರ್,ಕೆರೀರ್ ಗೈಡೆನ್ಸ್, ಸ್ಕಿಲ್ ಟ್ರೈನಿಂಗ್, ಇಂಗ್ಲಿಷ್, ವ್ಯಕ್ತಿತ್ವ ವಿಕಾಸ ಮತ್ತು ಸಾಮಾನ್ಯ ಜ್ಞಾನದ ತರಬೇತಿ ಶಿಬಿರಗಳನ್ನು 1985ರಿಂದ ಸಂಘಟಿಸುತ್ತಿರುವ, ಸ್ಪರ್ಧಾ ಮಾಹಿತಿಯ ಅಂಕಣ ಬರಹಗಳು ಮತ್ತು 75ಕ್ಕೂ ಹೆಚ್ಚು ಕೃತಿಗಳ ಮೂಲಕ ಯುವಜನರಿಗೆ ಉಪಯುಕ್ತ ಮಾರ್ಗದರ್ಶನ ಮಾಡುತ್ತಿರುವ ಬೇದ್ರೆ ಮಂಜುನಾಥ ಅವರ ಹಲವು ವರ್ಷಗಳ ಪರಿಶ್ರಮದ ಸಂಕಲನ ಇದು. ಓದಿ. ಓದಿಸಿ. ಯಶಸ್ಸು ನಿಮ್ಮದಾಗಲಿ!
 
ಮೂಲ : ಬೇದ್ರೆ ಫೌಂಡೇಶನ್ ಬ್ಲಾಗ್   www.bedrefoundation.blogspot.in
  ಕೃತಿಯ ಲೇಖಕರು:- ಶ್ರೀ ಮಂಜುನಾಥ ಬೇದ್ರೆ.

Friday, 16 March 2012

ಚೈತನ್ಯ ಹೆಗಡೆಯವರ ಲೇಖನ

ವಾಸ್ತವ ಸಂಗತಿಗಳ ಸೂಕ್ಷ್ಮತೆಯನ್ನು ಶ್ರೀ ಚೈತನ್ಯ ಹೆಗಡೆಯವರು ಎಳೆ ಎಳೆಯಾಗಿ ಈ ಲೇಖನದಲ್ಲಿ ಬಿಡಿಸಿಟ್ಟಿದ್ದಾರೆ. ಒಮ್ಮೆ ಓದಿ ನೋಡಿ..

Thursday, 8 March 2012

ಕನ್ನಡ ಮಾಧ್ಯಮ ನಿಕೃಷ್ಟವಲ್ಲ...

ಉನ್ನತ ಶಿಕ್ಷಣ ಪಡೆಯಲು ಅಥವಾ ಉನ್ನತ ಹುದ್ದೆ ಹೊಂದಲು ಕನ್ನಡ ಮಾಧ್ಯಮದಲ್ಲಿ ಓದಿದರೆ ಸಾಧ್ಯವಿಲ್ಲ. ಆಂಗ್ಲ ಮಾಧ್ಯಮದಲ್ಲಿಯೇ ಓದಬೇಕು ಎಂದು ಹಲುಬುವವರಿಗೆ ಇದೊಂದು ಅರಿವಿನ ಪಾಠ...